Posts

Showing posts from November, 2011

ನಿರ್ವಾತದಲ್ಲಿ ಬೆಳಕಿನ ಸೃಷ್ಟಿ!

Image
ಕಾಂತವಲಯದ ದಿಕ್ಕನ್ನು ಪ್ರತಿ ಸೆಕೆಂಡಿಗೆ ಹಲವು ಬಿಲಿಯನ್ ಬಾರಿ ಬದಲಾಯಿಸುವ ಮೂಲಕ ವಿಜ್ಞಾನಿಗಳು ಈ ವಿಶೇಷ ಫಲಕವನ್ನು ಸೃಷ್ಟಿಸಿದ್ದಾರೆ. ಆದರೂ ಸಹ ಈ ಫಲಕವು ಬೆಳಕಿನ ವೇಗದ ಶೆಕಡಾ 25ರಷ್ಟು ವೇಗದಲ್ಲಷ್ಟೇ ಚಲಿಸುವುದಕ್ಕೆ ಸಾಧ್ಯವಾಯಿತು. ಆದಾಗ್ಯೂ ಇಷ್ಟು ವೇಗದಲ್ಲಿ ಫಲಕ ಚಲಿಸುತ್ತಿದ್ದ ಕಾರಣದಿಂದಾಗಿ ನಿರ್ವಾತದಲ್ಲಿ ಸೃಷ್ಟಿಯಾಗುತ್ತಿದ್ದ ಬೆಳಕಿನ ಕಣಗಳನ್ನು ಅರ್ಥಾತ್ ಜೊತೆ ಜೊತೆಯಾಗಿ (ಅವಳಿಗಳು) ಸೃಷ್ಟಿಯಾಗುತ್ತಿದ್ದ ಫೋಟಾನ್ಗಳನ್ನು ಗುರುತಿಸಿ ಅವುಗಳ ಗುಣಲಕ್ಷಣಗಳನ್ನು ಅಳೆಯುವುದಕ್ಕೆ ವಿಜ್ಞಾನಿಗಳಿಗೆ ಸಾಧ್ಯವಾಗಿದೆ. ನಿರ್ವಾತ ಎಂದರೆ ಸಂಪೂರ್ಣ ಖಾಲಿ ಎಂದರ್ಥವಲ್ಲ. ಅಲ್ಲಿ ಮಿಂಚಿ ಮರೆಯಾಗುಂಥ ಫೋಟಾನ್ಗಳಿರುತ್ತವೆ. ಅಂದರೆ ವರ್ಚುವಲ್ ಅಥವಾ ಭ್ರಾಮಕ ಫೋಟಾನ್ಗಳಿರುತ್ತವೆ. ಈ ರೀತಿ ನಿರ್ವಾತದಲ್ಲಿ ಸೃಷ್ಟಿಯಾಗುವಂಥ ವರ್ಚುವಲ್ ಫೋಟಾನ್ಗಳು ಅಥವಾ ಭ್ರಾಮಕ ಫೋಟಾನ್ಗಳನ್ನು ಬಹುತೇಕ ಬೆಳಕಿನ ವೇಗದಲ್ಲಿ ಚಲಿಸುತ್ತಿರುವಂಥ ಫಲಕದಿಂದ ಪ್ರತಿಫಲಿಸುವಂತೆ ಮಾಡಿದರೆ ನೈಜ ಫೋಟಾನ್ಗಳ ಅರ್ಥಾತ್ ಬೆಳಕಿನ ಸೃಷ್ಟಿಯಾಗುತ್ತದೆ.

ಬುವಿಯ ಸುಡುತ್ತವೆಯೇ ಸೌರಜ್ವಾಲೆಗಳು?

Image
ನಿಜಕ್ಕೂ ಪ್ರಳಯವಾಗುತ್ತದೆಯೇ? ಸೌರಜ್ವಾಲೆಗಳು ಭೂಮಿಯನ್ನು ಸುಡುತ್ತವೆಯೇ? ಸೂರ್ಯನಲ್ಲಿನ ಕಾಂತವಲಯದಲ್ಲಿ ಅತಿಯಾದ ಚಟುವಟಿಕೆಗಳು ಕಾಣಿಸಿಕೊಳ್ಳುವ ಮೂಲಕ ಉತ್ಪತ್ತಿಯಾಗುವಂಥ ಶಕ್ತಿಯುತ ಸೌರಜ್ವಾಲೆಗಳಿಂದ ಭೂಮಿ ಸರ್ವನಾಶವಾಗುತ್ತದೆ ಎಂಬ ಮಾತು ನಿಜವೇ?... ಈ ವಿಚಾರವಾಗಿ ಹುಟ್ಟಿಕೊಳ್ಳುವ ಪ್ರಶ್ನೆಗಳಿಗೆ ಕೊನೆಯಿಲ್ಲ. ಅವಕ್ಕೆ ಸ್ಪಷ್ಟವಾದ ಉತ್ತರಗಳೂ ಇಲ್ಲ. ಇನ್ನು ಕೆಲವೇ ವಾರಗಳು. 2012ನೇ ಇಸವಿ ಕಾಲಿಡುತ್ತಿದೆ. `2012' ಎಂಬ ಧ್ವನಿ ಕೆಳಿದ ತಕ್ಷಣ ಬಹಳಷ್ಟು ಜನ ಜೀವನದ ಬಗೆಗಿನ ಎಲ್ಲ ಆಸೆಗಳನ್ನೂ, ಭರವಸೆಗಳನ್ನೂ ಕಳೆದುಕೊಳ್ಳುತ್ತಿದ್ದಾರೆ. ಭೂಮಿಯ ಕಥೆಯೇ ಮುಗಿದು ಹೋಯಿತು; ಪ್ರಳಯ ಆಗುತ್ತೆ; ಸೂರ್ಯ ಉಗುಳಿದ ಸೌರಜ್ವಾಲೆಗಳು ಭೂಮಿಯನ್ನು ಸುಟ್ಟು ಹಾಕುತ್ತವೆ... ಎಂಬೆಲ್ಲ ಸುದ್ದಿಗಳು ಮೇಲಿಂದ ಮೇಲೆ ಪ್ರಸಾರವಾಗಿ ಜನರಲ್ಲಿನ ಭೀತಿಯನ್ನು ಇನ್ನಷ್ಟು ಹೆಚ್ಚಿಸುತ್ತಿವೆ. ಹಲವು ಜನರಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಭೀತಿಯಿದೆ ನಿಜ. ಆದರೆ ಅವರೆಲ್ಲ ಇಂಥದ್ದೇನೂ ಆಗುವುದಿಲ್ಲ ಎಂದು ತಮ್ಮನ್ನು ತಾವೇ ಸಮಾಧಾನ ಮಾಡಿಕೊಳ್ಳುತ್ತಿದ್ದಾರೆ. ನಿಜಕ್ಕೂ ಪ್ರಳಯವಾಗುತ್ತದೆಯೇ? ಸೌರಜ್ವಾಲೆಗಳು ಭೂಮಿಯನ್ನು ಸುಡುತ್ತವೆಯೇ? ಸೂರ್ಯನಲ್ಲಿನ ಕಾಂತವಲಯದಲ್ಲಿ ಅತಿಯಾದ ಚಟುವಟಿಕೆಗಳು ಕಾಣಿಸಿಕೊಳ್ಳುವ ಮೂಲಕ ಉತ್ಪತ್ತಿಯಾಗುವಂಥ ಶಕ್ತಿಯುತ ಸೌರಜ್ವಾಲೆಗಳಿಂದ ಭೂಮಿ ಸರ್ವನಾಶವಾಗುತ್ತದೆ ಎಂಬ ಮಾತು ನಿಜವೇ?... ಈ ವಿಚಾರವಾಗಿ ಹುಟ್ಟಿಕೊಳ್ಳುವ ಪ್ರ

ಮಂಗಳಪ್ರಯಾಣಕ್ಕೆ ಸಿದ್ಧತೆ...

Image
ಮೂವರು ರಷ್ಯನ್ನರು, ಒಬ್ಬ ಫ್ರೆಂಚ್, ಒಬ್ಬ ಇಟಾಲಿಯನ್-ಕೊಲಂಬಿಯನ್ ಮತ್ತು ಒಬ್ಬ ಚೀನೀ ಬಾಹ್ಯಾಕಾಶ ವಿಜ್ಞಾನಿಗಳನ್ನು ಒಳಗೊಂಡಂಥ ತಂಡ ಮಾಸ್ಕೋದಲ್ಲಿನ ಈ ಮಂಗಳನ ತದ್ರೂಪಿನಲ್ಲಿ 520 ದಿನಗಳ ಕಾಲ ಇದ್ದು ಬಂದಿದ್ದಾರೆ. ಇಲ್ಲಿ ಮಂಗಳನಲ್ಲಿರಬಹುದಾದಂಥ ಎಲ್ಲ ರೀತಿಯ ವಾತಾವರಣವೂ ಇದೆ, ಆದರೆ ಗುರುತ್ವಾಕರ್ಷಣಶಕ್ತಿಯೊಂದನ್ನು ಹೊರತುಪಡಿಸಿ! ಹೀಗಾಗಿ ತೂಕವಿಲ್ಲದೇ ಇರುವ ಅನುಭವ ಮಾತ್ರ ಸಿಕ್ಕಿಲ್ಲ.  ಅದು ಒಂದು ಸಂಪೂರ್ಣ ಮುಚ್ಚಲ್ಪಟ್ಟ ಕೋಣೆ; ಗಾಳಿ ನುಸುಳುವುದಕ್ಕೆ ಒಂಚೂರೂ ಜಾಗವಿಲ್ಲ; ನೀರಂತೂ ಪ್ರವೇಶಿಸುವುದಕ್ಕೇ ಆಗದು; ಒಳಗಣ ಶಾಖಕ್ಕೆ ಸಾಮಾನ್ಯ ಜೀವ ಬೆಂದು ಹೋಗುವಂಥ ಪರಿಸ್ಥಿತಿ; ಆದರೂ ಆರು ಜನ ಅದರೊಳಗಿದ್ದರು; ಒಂದೆರಡು ದಿನವಲ್ಲ; ಬರೋಬ್ಬರಿ 520 ದಿನಗಳು! ಕೃತಕ ಆಮ್ಲಜನಕದ ಉಸಿರಾಟ, ಸಂಸ್ಕರಿತ ಆಹಾರ; ಇವಿಷ್ಟನ್ನೇ ಸೇವಿಸಿಕೊಂಡು ಅಷ್ಟೂ ದಿನ ಈ ಕೋಣೆಯೊಳಗಿದ್ದರು; ಕೆಲವು ದಿನಗಳ ಹಿಂದಷ್ಟೇ ಈ ಆರೂ ಜನರು ಈ ಕೋಣೆಯಿಂದ ಹೊರಬಂದಾಗ ಅವರು ಒಂದಷ್ಟು ಸೊರಗಿದ್ದಾರೆಯೋ ಎಂದೆನಿಸುತ್ತಿತ್ತು; ಆದರೂ ಸಹ ಅವರ ಮುಖದಲ್ಲಿ ಮಂದಹಾಸ ಮಿನುಗುತ್ತಿತ್ತು; ಹೊಸದೊಂದು ಸಾಹಸಕ್ಕೆ ಅಣಿಯಾದ, ಯುದ್ಧವನ್ನು ಜಯಿಸಬಲ್ಲೆ ಎಂಬ ದೃಢವಿಶ್ವಾಸ ಹೊಂದಿರುವ ರಣಕಲಿಯ ಕಳೆ ಅವರಲ್ಲಿತ್ತು.

ಅತಿಯಾದ ಕಾಳಜಿಯೂ ಮುಳುವಾದೀತು ಜೋಕೆ...!

Image
ಮನುಷ್ಯನ ಕೊಳ್ಳುಬಾಕ ಸಂಸ್ಕೃತಿಯ ಲಾಭ ಮಾಡಿಕೊಳ್ಳಲು ಹವಣಿಸುವ ಕಂಪನಿಗಳು `ಆರೋಗ್ಯದ ಬಗ್ಗೆ ಮಾಹಿತಿ ಕೊಡುವ ಉಪಕರಣಗಳು' ಎಂಬ ಹಣೆಪಟ್ಟಿಯೊಂದಿಗೆ ಹಲವಾರು ಉಪಕರಣಗಳನ್ನು ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಮೊದಲೇ ಈ ರೋಗಗಳಿಂದಾಗಿ ಕಂಗೆಟ್ಟಿರುವಂಥ ಜನ ಈ ಉಪಕರಣಗಳನ್ನು ಮುಗಿಬಿದ್ದು ಕೊಳ್ಳುತ್ತಾರೆ.   ಅತಿಯಾದರೆ ಅಮೃತವೂ ವಿಷ ಎನ್ನುತ್ತಾರೆ. ಕೆಲವೊಂದು ಬಾರಿ ನಮ್ಮ ವಿಪರೀತ ಕಾಳಜಿಯೇ ನಮಗೆ ಮುಳುವಾಗುವಂಥ ಪ್ರಸಂಗಗಳೂ ಬರುತ್ತವೆ. ದಪ್ಪಗಾಗುತ್ತೇವೆ ಎಂಬ ಆತಂಕದಲ್ಲಿ ಆಹಾರ ಬಿಡುತ್ತೇವೆ; ಪೋಷಕಾಂಶದ ಕೊರತೆ ಎದುರಾಗುತ್ತದೆ; ನಿತ್ರಾಣ ಆವರಿಸಿಕೊಳ್ಳುತ್ತದೆ; ಮತ್ತೆ ಅದನ್ನು ಸರಿಪಡಿಸುವುದಕ್ಕೆ ಔಷಧಿ ತೆಗೆದುಕೊಳ್ಳುತ್ತೇವೆ; ಉಪ್ಪು ತಿಂದರೆ ಬಿಪಿ ಬರುತ್ತೆ ಅಂತ ಉಪ್ಪು ತೀರಾ ಕಡಿಮೆ ತಿನ್ನುತ್ತೇವೆ; ಬಿಪಿ ಕಡಿಮೆಯಾಗುತ್ತದೆ; ಮತ್ತೆ ಗಿಡ್ಡಿನೆಸ್ ಕಾಡುತ್ತದೆ; ಅದಕ್ಕೆ ಔಷಧಿ.      ಹೌದು, ಮನುಷ್ಯ ಸದಾ ಏನೋ ಮಾಡುತ್ತೇನೆಂದು ಹೊರಡುತ್ತಾನೆ. ಅದಿನ್ನೇನೋ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ವಿವಿಧ ರೋಗಗಳೇ ಪ್ರಪಂಚವನ್ನು ಆಳುತ್ತಿರುವಂಥ ಸಂದರ್ಭದಲ್ಲಿ ಮಾನವ ಯಾವುದೋ ಹೊಸ ರೋಗದ ಹೆಸರು ಕೇಳಿದರೆ ಭೀತಿಗೊಳಗಾಗುತ್ತಿದ್ದಾನೆ. ಅದರಿಂದ ರಕ್ಷಣೆ ಪಡೆಯಬೇಕು ಅಂತ ಮೊದಲೇ ಔಷಧಿ ತೆಗೆದುಕೊಳ್ಳುವ ಆತುರ ತೋರುತ್ತಾನೆ. ಇದಕ್ಕಿಂತಲೂ ಹೆಚ್ಚಾಗಿ ಮನುಷ್ಯನ ಕೊಳ್ಳುಬಾಕ ಸಂಸ್ಕೃತಿಯ ಲಾಭ ಮಾಡಿಕೊಳ್ಳಲು ಹವಣಿಸುವ ಕಂಪನಿಗಳು `ಆರೋಗ್ಯದ ಬಗ